ಮುಂಬೈ, ಸೆ. 27 : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ನಿವಾಸಕ್ಕೆ ಜಂಟಿ ಕಮೀಷನರ್ ವಿನಯ್ ಚೌಬೆ ಹಾಗೂ ಪೊಲೀಸ್ ತಂಡ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ ಎಂದು ಮೂಲ ತಿಳಿಸಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಎಲ್ಲಾ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಇಡೀ ಪ್ರದೇಶದಲ್ಲಿ ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಅಲ್ಲದೇ ಪೊಲೀಸ್ ತಂಡ ಶ್ವಾನ ದಳದ ಜತೆಗೆ ಎನ್ ಸಿಪಿ ಕಚೇರಿಯಲ್ಲಿಯೂ ಪರಿಶೀಲನೆ ನಡೆಸುತ್ತಿದೆ ಎಂದು ಡಿಸಿಪಿ ಸಂಗ್ರಾಮ್ ಸಿಂಗ್ ನಿಶಾಂದರ್ ತಿಳಿಸಿದ್ದಾರೆ.