ಇಡಿ ರಾತ್ರಿ ಬೀದಿಯಲ್ಲೇ ಕಳೆದ ಬಿಜೆಪಿ ನಾಯಕರು

ಇಡಿ ರಾತ್ರಿ ಬೀದಿಯಲ್ಲೇ ಕಳೆದ ಬಿಜೆಪಿ ನಾಯಕರು

ಬೆಂಗಳುರು, ಜೂ. 15: ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿಯಿಂದ ಅಹೋರಾತ್ರಿ ಧರಣಿ ನಡೆಸಲಾಗಿದೆ. ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿಯನ್ನು ಅತಿ ಕಡಿಮೆ ದರಕ್ಕೆ ಮಾರುವ ರಾಜ್ಯ ಸರ್ಕಾರದ ತೀರ್ಮಾನ ವಿರೋಧಿಸಿ ಮತ್ತು ಪರಿಹಾರ ಕಾರ್ಯ ಕೈಗೊಳ್ಳುವಲ್ಲಿ ವೈಫಲ್ಯ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನ ಆನಂದ ರಾವ್ ಸರ್ಕಲ್ ಬಳಿ ಅಹೋರಾತ್ರಿ ಧರಣಿ ನಡೆಸಲಾಗಿದ್ದು, ಹೋರಾಟನಿರತರು ಸ್ಥಳದಲ್ಲೇ ಊಟ, ನಿದ್ದೆ ಮಾಡಿದ್ದಾರೆ.

ಜಿಂದಾಲ್ ಕಂಪನಿಗೆ 1.22 ಲಕ್ಷ ರೂ.ಗೆ 3667 ಎಕರೆ ಭೂಮಿ ಮಾರುವ ನಿರ್ಧಾರ ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಜಿಂದಾಲ್ ಗೆ ಭೂಮಿ ನೀಡುವ ವಿಚಾರವನ್ನು ಸಂಪುಟ ಉಪ ಸಮಿತಿ ಪರಿಶೀಲನೆಗೆ ವಹಿಸಲು ತೀರ್ಮಾನಿಸಲಾಗಿದೆ. ಬಿಜೆಪಿ ಹೋರಾಟ ಮುಂದುವರೆಸಿದೆ.

ಫ್ರೆಶ್ ನ್ಯೂಸ್

Latest Posts

Featured Videos