‘ಗೆಲ್ಲದಿದ್ದರೆ ನಾನು ಹೊಣೆಗಾರನಲ್ಲ’

‘ಗೆಲ್ಲದಿದ್ದರೆ ನಾನು ಹೊಣೆಗಾರನಲ್ಲ’

ಬೆಂಗಳೂರು, ನ. 25 : ಹದಿನೈದು ಕ್ಷೇತ್ರಗಳ ಉಪ ಚುನಾ ವಣೆಯು ದಿನದಿಂದ ದಿನಕ್ಕೆ ಕಾವೇರುತ್ತಿದ್ದರೂ ಕಾಂಗ್ರೆಸ್ನಲ್ಲಿ ಮಾತ್ರ ನಾಯಕರ ನಡುವಿನ ಗೊಂದಲಕ್ಕೆ ತೆರೆ ಬಿದ್ದಿಲ್ಲ. “ಹೆಚ್ಚಿನ ಸ್ಥಾನಗಳನ್ನು ಗೆಲ್ಲದಿದ್ದರೆ ನಾನು ಹೊಣೆಗಾರನಲ್ಲ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೈಕಮಾಂಡ್ಗೆ ಸಂದೇಶ ರವಾನಿಸಿದ್ದಾರೆ ಎಂದು ಹೇಳಲಾಗಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಶನಿವಾರ ರಾತ್ರಿ ಕೆಪಿಸಿಸಿ ಅಧ್ಯಕ್ಷದಿನೇಶ್ ಗುಂಡೂರಾವ್ ಹಾಗೂ ಸಿದ್ದ ರಾಮಯ್ಯ ಜತೆ ರಹಸ್ಯ ಸಭೆ ನಡೆಸಿದ್ದು, ಈ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ನಲ್ಲಿನ ಗೊಂದಲ ಹಾಗೂ ಉಪ ಚುನಾವಣೆಯಲ್ಲಿ ಸಂಪನ್ಮೂಲದ ಕೊರತೆಯ ಬಗ್ಗೆ ಸಿದ್ದರಾಮಯ್ಯ ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಫ್ರೆಶ್ ನ್ಯೂಸ್

Latest Posts

Featured Videos