ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣ: ಶಾಸಕ ಬಿ‌.ನಾಗೇಂದ್ರ  ವಿಚಾರಣೆಗೆ ಹಾಜರ್

ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣ: ಶಾಸಕ ಬಿ‌.ನಾಗೇಂದ್ರ  ವಿಚಾರಣೆಗೆ ಹಾಜರ್

ಬಳ್ಳಾರಿ: ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಗ್ರಾಮಾಂತರ ಶಾಸಕ ಬಿ‌.ನಾಗೇಂದ್ರ ಇಂದು  ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ಸಲುವಾಗಿ ನ್ಯಾಯಾಲಯವು ಶಾಸಕ ನಾಗೇಂದ್ರ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿತ್ತು. ನಿನ್ನೆಯಷ್ಟೇ ನ್ಯಾಯಾಧೀಶರ ಮುಂದೆ ಹಾಜರಾಗಿದ್ದ ಶಾಸಕರು, ಜಾಮೀನು ರಹಿತ ವಾರೆಂಟ್ ರದ್ದುಗೊಳಿಸುವಂತೆ ಕೋರಿದ್ದಾರೆ.

ಬಳಿಕ, ಈ ವಿಚಾರಣೆಯನ್ನು ನ್ಯಾಯಾಧೀಶ ಬಿ. ವಿ. ಪಾಟೀಲ ಅವರು ಜನವರಿ 16 ಕ್ಕೆ ಮುಂದೂಡಿದ್ದಾರೆ. ಇನ್ನು ಈ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ವಿಜಯನಗರ ಕ್ಷೇತ್ರದ ಶಾಸಕ ಬಿ.ಎಸ್.ಆನಂದಸಿಂಗ್ ಮತ್ತು ಸ್ವಸ್ತಿ ನಾಗರಾಜ ವಿರುದ್ಧವೂ ಜಾಮೀನು ರಹಿತ ವಾರೆಂಟ್ ಮುಂದುವರಿದಿದೆ ಎಂದು ಕೋರ್ಟ್ ಮೂಲಗಳು ತಿಳಿಸಿವೆ.

ಫ್ರೆಶ್ ನ್ಯೂಸ್

Latest Posts

Featured Videos