ಐಎಂಎ ತನಿಖೆಗೆ ಒತ್ತಾಯ: ನಿರ್ಮಲಾ ಸೀತಾರಾಮನ್ ಭೇಟಿಯಾದ ಶೋಭಾ

ಐಎಂಎ ತನಿಖೆಗೆ ಒತ್ತಾಯ: ನಿರ್ಮಲಾ ಸೀತಾರಾಮನ್ ಭೇಟಿಯಾದ ಶೋಭಾ

ನವದೆಹಲಿ, ಜೂ. 20: ಐಎಂಎ ವಂಚನೆ ಪ್ರಕರಣದ ಆರೋಪಿ ಮನ್ಸೂರ್ ಖಾನ್ ವಿರುದ್ಧ ಕೇಂದ್ರ ಹಣಕಾಸು ಸಚಿವಾಲಯ ತನಿಖೆ ನಡೆಸುವಂತೆ ಕೋರಿ ಶೋಭಾ ಕರಂದ್ಲಾಜೆ ನೇತೃತ್ವದ ತಂಡ ನಿರ್ಮಲಾ ಸೀತಾರಾಮನ್ ಅವರಿಗೆ ಇಂದು ಮನವಿ ಸಲ್ಲಿಸಿದ್ದಾರೆ.

ಐಎಂಎ ಜ್ಯುವೆಲರ್ಸ್ ಮಾಲೀಕ ಮನ್ಸೂರ್ ಖಾನ್ ಮೋಸದಿಂದ ಜನರಿಗೆ ಆಗಿರುವ ಅನ್ಯಾಯದ ವಿರುದ್ಧ ಕೇಂದ್ರ ಹಣಕಾಸು ಸಚಿವಾಲಯದ ನೇತೃತ್ವದಲ್ಲಿ ತನಿಖೆ ನಡೆಸಿ ಈ ಅವ್ಯವಹಾರವನ್ನು ಬಯಲಿಗೆಳೆಯಬೇಕು ಹಾಗೂ ಈ ಪ್ರಕರಣದಲ್ಲಿ ಶಾಮೀಲು ಆಗಿರುವಂತಹ ಎಲ್ಲರ ಮೇಲೆಯೂ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ರಾಜ್ಯದ ಕೆಲ ಸಂಸದರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬೆಂಗಳೂರಿನಲ್ಲಿ ಇಂದು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos