ಬೆಂಗಳೂರು, ಜು. 24 : ಕೆಪಿಐಡಿ ಕಾಯ್ದೆ 2004ರಡಿಯಲ್ಲಿ ಉಪ ಆಯುಕ್ತರ ಬದಲಾಗಿ ಉನ್ನತ ದರ್ಜೆಯ ಹಿರಿಯ ಅಧಿಕಾರಿಯನ್ನು ನೇಮಕ ಮಾಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.
ಉನ್ನತ ದರ್ಜೆಯ ಹಿರಿಯ ಅಧಿಕಾರಿಯನ್ನು ನೇಮಕ ಮಾಡಿ ಐಎಂಎ ಕಂಪನಿ ಹೂಡಿಕೆದಾರರ ಹಿತಾಸಕ್ತಿ ಕಾಪಾಡಲು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಹೆಚ್ ಟಿ ನರೇಂದ್ರ ಪ್ರಸಾದ್ ನೇತೃತ್ವದ ವಿಭಾಗೀಯ ಪೀಠ, ಸಮರ್ಥ ಹಿರಿಯ ಅಧಿಕಾರಿಯನ್ನು ತನಿಖೆಗೆ ನೇಮಕ ಮಾಡುವಂತೆ ಆದೇಶ ಹೊರಡಿಸಿದೆ.
ಐಎಂಎ ವಂಚನೆ ಕೇಸಿಗೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಎಲ್ಲಾ ಪೊಂಜಿ ಹಗರಣಗಳ ತನಿಖೆ ನಿಭಾಯಿಸಲು ರಾಜ್ಯ ಸರ್ಕಾರ ಒಪ್ಪಿದೆಯೇ ಎಂದು ಪರೀಕ್ಷಿಸುವಂತೆ ನ್ಯಾಯಾಲಯ ಸರ್ಕಾರಿ ಪರ ವಕೀಲರಿಗೆ ಸೂಚಿಸಿದ್ದಾರೆ. 2018ರಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿ ಉಲ್ಲೇಖಿಸಿ ನ್ಯಾಯಾಲಯ 2018ರಲ್ಲಿಯೇ ಪೊಲೀಸರು ಇದರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದ್ದರೆ ಇಂತಹ ವಿಷಯಗಳು ನಡೆಯುತ್ತಿರಲಿಲ್ಲ. ಕೆಪಿಐಡಿ ಕಾಯ್ದೆಯಡಿ ಕಳೆದ ತಿಂಗಳು 25ರಂದು ಐಎಂಎ ವಂಚನೆ ಪ್ರಕರಣದ ತನಿಖೆಗೆ ಸಮರ್ಥ ಅಧಿಕಾರಿಯನ್ನಾಗಿ ಉಪ ಆಯುಕ್ತರನ್ನು ನೇಮಿಸುವ ಮೊದಲು ಅವರ ನಿಖರತೆಯನ್ನು ಸರ್ಕಾರ ಪರೀಕ್ಷಿಸಬೇಕಾಗಿತ್ತು ಎಂದು ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.