ನವದೆಹಲಿ, ಅ. 4 : ಪಾಕ್ ವಿರುದ್ಧ ಮಾಜಿ ಕ್ರಿಕೆಟ್ ಆಟಗಾರ ವಿರೇಂದ್ರ ಸೆಹ್ವಾಗ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ವಿರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿ, ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಇಮ್ರಾನ್ ಖಾನ್ ನಿಷ್ಪ್ರಯೋಜಕ ಭಾಷಣ ಮಾಡುವ ಮೂಲಕ ತಮ್ಮನ್ನು ತಾವೇ ಅವಮಾನಿಸಿಕೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ವಿಶ್ವಸಂಸ್ಥೆಯಲ್ಲಿ ಭಾರತದ ವಿರುದ್ಧ ದ್ವೇಷಕಾರಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ನಡೆಗೆ ಟೀಂ ಇಂಡಿಯಾ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಮ್ಮನ್ನು ಕೆಳಮಟ್ಟಕ್ಕೆ ಇಳಿಸಿಕೊಳ್ಳಲು, ಅವಮಾಕ್ಕೊಳಗಾಗಲು ಇಮ್ರಾನ್ ಖಾನ್ ಹೊಸ ಮಾರ್ಗಗಳನ್ನು ಕಂಡುಕೊಂಡಿದ್ದಾರೆ ಎಂದು ಸೆಹ್ವಾಗ್ ಟ್ವೀಟ್ನಲ್ಲಿವ್ಯಂಗ್ಯವಾಡಿದ್ದಾರೆ.