ಹಾಸನ, ನ. 25 : ಭೀಕರ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮಾನಿ ಗ್ರಾಮದ ಅಭಿಷೇಕ್(29) ಮೃತ ದುರ್ದೈವಿ.
ಸಾರಿಗೆ ಸಂಸ್ಥೆಯ ಬಸ್ ರಸ್ತೆಗೆ ಉರುಳಿ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, 25 ಮಂದಿ ಗಾಯಗೊಂಡಿದ್ದಾರೆ. 46 ಮಂದಿ ಪ್ರಯಾಣಿಕರನ್ನು ತುಂಬಿಕೊಂಡ ಬಸ್ ಮಂಗಳೂರು ಕಡೆಯಿಂದ ಬೆಂಗಳೂರು ಕಡೆ ತೆರಳುತಿತ್ತು. ನಿಯಂತ್ರಣ ತಪ್ಪಿದ ಬಸ್ ರಸ್ತೆಗೆ ಉರುಳಿ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು. ಹಿರಿಸಾವೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.