ಕಾಶ್ಮೀರದಲ್ಲಿ ಉಗ್ರರ ಕೃತ್ಯ ನಿಂತಿವೆ

ಕಾಶ್ಮೀರದಲ್ಲಿ ಉಗ್ರರ ಕೃತ್ಯ ನಿಂತಿವೆ

ನವದೆಹಲಿ, ನ. 27 : ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಕೃತ್ಯಗಳು ಬಹುತೇಕ ಕಡಿಮೆಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ. ಲೋಕಸಭೆಯಲ್ಲಿಂದು ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾಶ್ಮೀರದಲ್ಲಿ ಭಯೋತ್ಪಾದನಾ ಪ್ರಕರಣಗಳು ಬಹುತೇಕ ನಿಂತಿವೆ ಎಂದರು.
ಭಾರತೀಯ ಸೇನೆ , ಅರೆ ಸೇನಾ ಪಡೆಗಳು ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸಮನ್ವಯತೆಯಿಂದ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಹೇಳಿದರು. ಕಳೆದ 35 ವರ್ಷಗಳಿಂದ ಕಾಶ್ಮೀರ ಕಣಿವೆಯಲ್ಲಿ ಉಗ್ರರ ಪ್ರಾಬಲ್ಯವಿತ್ತು. ಈಗ ಅದು ಗಣನೀಯವಾಗಿ ಇಳಿಮುಖವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos