ಗೋದಾಮಿನಲ್ಲಿ ಅಗ್ನಿ ಅವಘಡ

ಗೋದಾಮಿನಲ್ಲಿ ಅಗ್ನಿ ಅವಘಡ

ನವದೆಹಲಿ, ಡಿ. 8 : ಉತ್ತರ ದೆಹಲಿಯ ಸದರ್ ಬಜಾರ್ ನಲ್ಲಿರುವ ಕೃಷಿ ಮಾರುಕಟ್ಟೆಯ ಗೋದಾಮಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಭಾರೀ ಹೊಗೆಯಿಂದ ಉಸಿರುಗಟ್ಟಿ 35 ಮಂದಿ ಸಾವನ್ನಪ್ಪಿದ್ದು, 22 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.

ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು ಅವಘಡದಲ್ಲಿ 52ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದೆ. ಘಟನಾ ಸಂಬಂಧ 30ಕ್ಕೂ ಹೆಚ್ಚು ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸುಮಾರು 5.22ಕ್ಕೆ ನಮಗೆ ಕರೆ ಬಂತು. ಕೂಡಲೇ 30 ಮಂದಿ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದೆವು. ಈ ವೇಳೆ ಫ್ಯಾಕ್ಟರಿ ಒಳಗಿದ್ದ 20 ಮಮದಿಯನ್ನು ರಕ್ಷಿಸಿ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಹಾಗೂ ಹಿಂದೂ ರಾವ್ ಆಸ್ಪತ್ರೆಗೆ ದಾಖಲಿಸಿದೆವು ಎಮದು ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos