ಸ್ಥಾಯಿ ಸಮಿತಿ ಅಧ್ಯಕ್ಷರ ಕಚೇರಿ ಉದ್ಘಾಟನೆ

ಸ್ಥಾಯಿ ಸಮಿತಿ ಅಧ್ಯಕ್ಷರ ಕಚೇರಿ ಉದ್ಘಾಟನೆ

ತುಮಕೂರು:ಜನಪರ ಕಾಳಜಿ, ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಒತ್ತು ನೀಡುವುದಾಗಿ ನೂತನವಾಗಿ ಆಯ್ಕೆಯಾದ ತುಮಕೂರು ತಾಲೂಕು ಪಂಚಾಯಿತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಹೆಚ್.ಜಿ ಮಧು ತಿಳಿಸಿದರು.

ತಾಲೂಕು ಪಂಚಾಯಿತಿಯಲ್ಲಿ ಸಾಕಷ್ಟು ಅನುದಾನವಿದೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಬಹುದು, ತಾಲೂಕು ಪಂಚಾಯಿತಿಯ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ಎಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳಿಲ್ಲವೋ ಅಂತಹ ಕಡೆ ಅನುದಾವನನ್ನು ಬಳಸಿಕೊಂಡು ಅಭಿವೃದ್ಧಿ ಮಾಡುವುದಾಗಿ ತಿಳಿಸಿದ ಅವರು ಸದಸ್ಯರಿಗೆ ಸಹಕರಿಸುವುದಾಗಿ ತಿಳಿಸಿದರು.

ಕಚೇರಿ ಉದ್ಘಾಟನೆಯಲ್ಲಿ ತಾಪಂ ಅಧ್ಯಕ್ಷೆ ಕವಿತಾ ರಮೇಶ್,ಉಪಾಧ್ಯಕ್ಷ ಶಾಂತಕುಮಾರ್,ಇಒ ಜೈಪಾಲ್,ಸದಸ್ಯರಾದ ವಿಜಿಕುಮಾರ್,ರವಿ,ಶಿವಕುಮಾರ್ ಮುಂತಾದವರು ಇದ್ದರು.

ಫ್ರೆಶ್ ನ್ಯೂಸ್

Latest Posts

Featured Videos