ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಘಟನೆ

ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಘಟನೆ

ಮಂಗಳೂರು: ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆಸಿಡ್ ಎರಚಿರುವ ಆಘಾತಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕಡಬದ ಸರ್ಕಾರಿ ಕಾಲೇಜು ಬಳಿ ಈ ಘಟನೆ ನಡೆದಿದೆ. ಮಾಸ್ಕ್, ಟೋಪಿ ಧರಿಸಿ ಬಂದಿದ್ದ ದುಷ್ಕರ್ಮಿಯೋರ್ವ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿದ್ದಾನೆ. ಪರಿಣಾಮ ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ತಿಳಿದು ಬಂದಿದೆ. ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿನಿಯರಾದ ಅಲೀನಾ ಸಿಬಿ, ಅರ್ಚನಾ ಮತ್ತು ಅಮೃತ ಎಂಬ ಮೂವರ ಮೇಲೆ ದಾಳಿ ಮಾಡಿದ್ದು, ಇದರಿಂದ ಅವರು ಗಂಭೀರ ಗಾಯಕ್ಕೊಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ಮೂವರು ವಿದ್ಯಾರ್ಥಿನಿಯರಿಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆ ಮಾಡಲಾಗಿದೆ.

ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಕೃತ್ಯ ಎಸಗಿದ ರಾಕ್ಷಸನನ್ನು ಕೇರಳ ಮೂಲದ ಅಬೀನ್ ಎಂದು ಗುರುತಿಸಲಾಗಿದ್ದು, ಸದ್ಯ ಆತನನ್ನು ಬಂಧಿಸಿರುವ ಕಡಬ ಪೊಲೀಸರು ತಮ್ಮ ವಶದಲ್ಲಿ ಇರಿಸಿಕೊಂಡಿದ್ದಾರೆ.

ಇನ್ನು ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಮಾಹಿತಿ ನೀಡಿದ್ದು, ‘ಇದು ಲವ್ ವಿಚಾರವಾಗಿ ನಡೆದಿರುವ ಘಟನೆ. ಈ ಆ್ಯಸಿಡ್ ಕಡಿಮೆ ತೀವ್ರತೆಯನ್ನು ಹೊಂದಿದೆ. ಈ ಆ್ಯಸಿಡ್ ನಿಂದ ಗುಳ್ಳೆಗಳು ಸೃಷ್ಠಿಯಾಗುತ್ತದೆ. ಒಬ್ಬಾಕೆಯ ಮುಖದ ಮೇಲೆ ಆ್ಯಸಿಡ್ ಎರಚಿದ್ದಾನೆ. ಈ ವೇಳೆ ಇಬ್ಬರ ಕೈಗೆ ಆಸ್ಯಿಡ್ ದ್ರವ್ಯ ತಾಗಿದೆ ಎಂದು ಹೇಳಿದ್ದಾರೆ.

ಅಲ್ಲದೇ, ಆರೋಪಿ ವಿದ್ಯಾರ್ಥಿಯನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು, ಆತನಿಂದ ಆಸ್ಯಿಡ್ ಬಾಟಲ್ ವಶಪಡಿಸಿಕೊಂಡಿದ್ದೇವೆ. ಆಸ್ಯಿಡ್ ಸಿಕ್ಕಿದ ಬಗ್ಗೆ ವಿಚಾರಣೆ ಮಾಡುತ್ತಿದ್ದೇವೆ. ಪ್ರಾಥಮಿಕ ವಿಚಾರಣೆಯಲ್ಲಿ ಲವ್ ಮಾಹಿತಿಯನ್ನು ಹೇಳಿದ್ದಾನೆ. ವಿದ್ಯಾರ್ಥಿನಿಯ ಸ್ಥಿತಿ ಸದ್ಯ ಜೌಟ್ ಆಫ್ ಡೇಂಜರ್ ಇದೆ ಎಂದು ತಿಳಿಸಿದ್ದಾರೆ. ಇನ್ನು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಬೇರೆ ಬೇರೆ ಆಯಾಮದಲ್ಲಿ ತನಿಖೆ ಮಾಡುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos