ಮಂಡ್ಯದಲ್ಲಿ ಮತ್ತೆ ಐಟಿ ದಾಳಿ

ಮಂಡ್ಯದಲ್ಲಿ ಮತ್ತೆ ಐಟಿ ದಾಳಿ

ಬೆಂಗಳೂರು, . 1, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಆದಾಯ ತೆರಿಗೆ(ಐಟಿ) ಅಧಿಕಾರಿಗಳು ದಾಳಿ ನಡೆಸುತ್ತಿರುವುದಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಮತ್ತೆ ಐಟಿ ದಾಳಿ ಮುಂದುವರೆದಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಜಕ್ಕನಹಳ್ಳಿ ಗ್ರಾಮದಲ್ಲಿ ರವಿ ಎಂಬ ವ್ಯಾಪಾರಸ್ಥನ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ 10.5 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಆಧಾರದ ಮೇಲೆ 5 ಜನರ ಐಟಿ ತಂಡ ದಿಢೀರ್ ದಾಳಿ ನಡೆಸಿ ಚಿನ್ನಾಭರಣವನ್ನು ವಶಕ್ಕೆ ಪಡೆದಿದೆ. ರವಿ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ಇಷ್ಟು ದೊಡ್ಡ ಮೊತ್ತದ ಚಿನ್ನಾಭರಣವನ್ನು ಯಾವ ಕಾರಣಕ್ಕಾಗಿ ಖರೀದಿ ಮಾಡಿದ್ದೀರಿ ಎಂದು ಐಟಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ.

ಮೂಲಗಳ ಪ್ರಕಾರ ರವಿ ಖರೀದಿಸಿದ ಚಿನ್ನಾಭರಣಕ್ಕೆ ಐಟಿ ತನಿಖಾಧಿಕಾರಿಗಳಿಗೆ ದಾಖಲೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos