ಐಟಿ ದಾಳಿ: ವಿಚಾರಣೆಗೆ ಹಾಜರಾದ ಡಿಕೆಶಿ

ಐಟಿ ದಾಳಿ: ವಿಚಾರಣೆಗೆ ಹಾಜರಾದ ಡಿಕೆಶಿ

ಬೆಂಗಳೂರು, . 29, ನ್ಯೂಸ್ ಎಕ್ಸ್ ಪ್ರೆಸ್: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು, ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಜರಾತಿ ವಿನಾಯಿತಿ ನಿರಾಕರಣೆ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾದರು.

ಐಟಿ ಸಲ್ಲಿಸಿರುವ ದೂರಿನಲ್ಲಿ ಹವಾಲಾ ಆರೋಪ ಮಾಡಿದ್ದು, ಆರೋಪಮುಕ್ತಗೊಳಿಸುವಂತೆ ಕೋರಿ ಡಿ.ಕೆ.ಶಿವಕುಮಾರ್ ಅರ್ಜಿ ಸಲ್ಲಿಸಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ.

ವಿಚಾರಣೆ ವೇಳೆ ಹಾಜರಾತಿ ವಿನಾಯಿತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರು ವಿಚಾರಣೆಗೆ ತಪ್ಪದೆ ಹಾಜರಾಗುತ್ತಿದ್ದಾರೆ. ಇಂದು ನಡೆದ ವಿಚಾರಣೆಗೂ ಕೂಡ ಹಾಜರಾಗಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos