ಬೆಂಗಳೂರು, ಮಾ.14, ನ್ಯೂಸ್ ಎಕ್ಸ್ ಪ್ರೆಸ್: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು ಮತ್ತು ಹಾವೇರಿಯಲ್ಲಿ ಇಂದು ಏಕಕಾಲಕ್ಕೆ ದಾಳಿ ನಡೆಸಿ ಸುಮಾರು 25 ಲಕ್ಷ ರೂ. ವಶಪಡಿಸಿಕೊಂಡಿಸಿದ್ದಾರೆ.
ಲೋಕಸಭೆ ಚುನಾವಣೆಗಾಗಿ ಗುತ್ತಿಗೆದಾರರಿಂದ ಹಣ ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಇಂಜಿನಿಯರ್ ಓರ್ವ ಐಟಿ ಬಲೆಗೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ಆತ ಬೆಂಗಳೂರಿನ ಹೋಟೆಲ್ವೊಂದರ ರೂಮ್ನಲ್ಲಿ ಹಣ ಸಂಗ್ರಹಿಸುತಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಹಲವು ಹೋಟೆಲ್ ಗಳಿಗೆ ಅಧಿಕಾರಿಗಳು ದಾಳಿ ಮಾಡಿ ತಪಾಸಣೆ ಮಾಡುತಿದ್ದಾರೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರಾಜ್ಯದ ವಿವಿಧೆಡೆ ದಿಢೀರ್ ದಾಳಿ ನಡೆಸಿದ್ದಾರೆ.