ಬೆಂಗಳೂರು, ಅ. 19: ರಾಂಚಿಯ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಮೊದಲ ಇನ್ನಿಂಗ್ಸ್ ಆರಂಭಿಸಿರುವ ಭಾರತಕ್ಕೆ ಆರಂಭಿಕ ಆಘಾತ ಉಂಟಾಗಿದೆ. ಎರಡು ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಓಪನರ್ ಮಯಾಂಕ್ ಅಗರ್ವಾಲ್ 10 ರನ್ ಗಳಿಸಿ ರಬಾಡ ಬೌಲಿಂಗ್ನಲ್ಲಿ ಔಟ್ ಆದರೆ, ಬಂದ ಬೆನ್ನಲ್ಲೆ ಚೇತೇಶ್ವರ್ ಪೂಜಾರ ಕೂಡ ಬೇಗನೆ ಔಟ್ ಆದರು.