ಲಂಡನ್: ವಿಶ್ವಕಪ್ ಕೂಟದ ಕೊನೆಯ ಲೀಗ್ ಪಂದ್ಯದಲ್ಲಿ ಇಂದು ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಲಂಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಇನ್ನು ಭಾರತದ ಪಾಲಿಗೆ ಇದು ಔಪಚಾರಿಕ ಪಂದ್ಯವಾದರೆ ಅತ್ತ ಲಂಕಾಗೆ ಟೂರ್ನಿಗೆ ವಿದಾಯ ಹೇಳುವ ತವಕದಲ್ಲಿದ್ದಾರೆ. ಇಂದಿನ ಪಂದ್ಯಕ್ಕೆ ಭಾರತವು ಎರಡು ಮಹತ್ವದ ಬದಲಾವಣೆ ಮಾಡಿಕೊಂಡಿದೆ, ವೇಗಿ ಮೊಹಮ್ಮದ್ ಶಮಿ ಮತ್ತು ಯಜುವೇಂದ್ರ ಚಾಹಲ್ ಗೆ ವಿಶ್ರಾಂತಿ ನೀಡಲಾಗಿದೆ. ಆ ಸ್ಥಾನಕ್ಕೆ ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಗೆ ಸ್ಥಾನ ನೀಡಲಾಗಿದ್ದು. ಕಳೆದ ಪಂದ್ಯದಲ್ಲಿ ಆಡಿದ ಆಟಗಾರರೇ ಮುಂದುವರೆಯಲಿದ್ದಾರೆ.