ಕಾನ್ಪುರ, ಏ. 20, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯ ಕುರಿತು ಕಾನ್ಪುರ ಕ್ಷೇತ್ರದ ಅಭ್ಯರ್ಥಿ ಶ್ರೀಪ್ರಕಾಶ್ ಜೈಸ್ವಾಲ್ ಅವರ ಪ್ರಚಾರಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು, ಮಾಜಿ ಪ್ರಧಾನಿ, ದಿವಂಗತ ಇಂದಿರಾ ಗಾಂಧಿಯವರೊಂದಿಗೆ ನನ್ನನ್ನು ಹೋಲಿಕೆ ಮಾಡಬೇಡಿ, ಆದರೆ ದೇಶಕ್ಕೆ ಸೇವೆ ಸಲ್ಲಿಸುವ ಮೂಲಕ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯುತ್ತೇನೆ ಎಂದು ಹೇಳಿದ್ದಾರೆ.
ದೇಶಕ್ಕೆ ಸೇವೆ ಸಲ್ಲಿಸುವ ಬಗ್ಗೆ ಅವರಿಗಿದ್ದ ಅಭಿಲಾಷೆ ನನ್ನ ಹಾಗೂ ಸಹೋದರ ರಾಹುಲ್ ಗಾಂಧಿಯವರ ಹೃದಯದಲ್ಲಿ ಜೀವಂತವಾಗಿದೆ. ಅದನ್ನು ಯಾರೂ ಅಳಿಸಲಾಗದು. ನೀವು ಅವಕಾಶ ಕೊಟ್ಟರೂ, ಕೊಡದಿದ್ದರೂ ಕೂಡ ನಮ್ಮ ಪಾಡಿಗೆ ನಾವು ಸೇವೆ ಮುಂದುವರಿಸುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ನುಡಿದರು.