ಬೆಂಗಳೂರು, ಏ. 5, ನ್ಯೂಸ್ ಎಕ್ಸ್ ಪ್ರೆಸ್: ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತೀವ್ರ ಕುತೂಹಲ ಮುಡಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಇಂದು ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.
ನಿಖಿಲ್ ಅವರು ಯಾವುದೇ ಬಹಿರಂಗ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿಲ್ಲ. ಬದಲಾಗಿ, ಮಂಡ್ಯದ ಕೆಲ ಮುಸ್ಲಿಂ ಮುಖಂಡರನ್ನು ಭೇಟಿ ಮಾಡಲಿದ್ದಾರೆ. ಇಂದು ಶುಕ್ರವಾರ ಹಾಗಾಗಿ ಮುಸ್ಲಿಮರು ಪಾರ್ಥನೆ ಸಲ್ಲಿಸಲು ಮಸೀದಿಗೆ ತೆರಳುತ್ತಾರೆ. ಅಲ್ಲಿಯೇ ಮುಸ್ಲಿಂ ಸಮುದಾಯದವರನ್ನು ನಿಖಿಲ್ ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.
ನಿಖಿಲ್ ಕುಮಾರಸ್ವಾಮಿ ಜೊತೆಗೆ ಜೆಡಿಎಸ್ ನ ಏಳೂ ಶಾಸಕರು ಹಾಗೂ ಮುಸ್ಲಿಂ ಮುಖಂಡರೂ ಸಾಥ್ ನೀಡಲಿದ್ದಾರೆ.