ಸಚಿವ ಸ್ಥಾನ ನೀಡಲು ಒತ್ತಾಯ

ಸಚಿವ ಸ್ಥಾನ ನೀಡಲು ಒತ್ತಾಯ

ಯಾದಗಿರಿ, ಡಿ. 17 : ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರಿಗೆ ಸಚಿವ ಸ್ಥಾನ ನೀಡಲು ವೀರಶೈವ ಲಿಂಗಾಯತ ರೆಡ್ಡಿ ಸಮಾಜ ಒತ್ತಾಯ ಮಾಡಿದೆ.
ಯಾದಗಿರಿ ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡ ಶ್ರೀನಿವಾಸರೆಡ್ಡಿ ಪಾಟೀಲ ಚನ್ನೂರು ಅವರು, ರೆಡ್ಡಿ ಸಮಾಜಕ್ಕೆ ಪರಿಗಣನೆ ತೆಗೆದುಕೊಂಡು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವೀರಶೈವ ಲಿಂಗಾಯತ ರೆಡ್ಡಿ ಸಮಾಜದ ಶಾಸಕರಾದ ವೆಂಕಟರೆಡ್ಡಿ ಮುದ್ನಾಳ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದರು.
ಯಾದಗಿರಿ ಜಿಲ್ಲೆಯು ಹಿಂದುಳಿದಿದ್ದು ಅಭಿವೃದ್ಧಿ ಗಾಗಿ ಯಾದಗಿರಿ ಶಾಸಕರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಯ ಅಭಿವೃದ್ಧಿ ಗೆ ಅನುಕೂಲವಾಗಲಿದೆ. ಈ ಬಗ್ಗೆ ರೆಡ್ಡಿ ಸಮಾಜದ ನಿಯೋಗ ಸಿಎಂ ಅವರಲ್ಲಿ ಹೋಗಿ ಮನವಿ ಸಲ್ಲಿಸುತ್ತೇವೆ ಎಂದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos