ಆಸಕ್ತಿ ತೋರದ ಶಾಸಕ, ಸಚಿವರು

ಆಸಕ್ತಿ ತೋರದ ಶಾಸಕ, ಸಚಿವರು

ಚಿತ್ರದುರ್ಗ: ನಗರಕ್ಕೆ ಮೆಡಿಕಲ್ ಕಾಲೇಜು ತರುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹಾಗೂ ಸ್ಥಳೀಯ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಆಸಕ್ತಿ ತೋರುತ್ತಿಲ್ಲ ಎಂದು ಕರ್ನಾಟಕ ನವ ನಿರ್ಮಾಣ ವೇದಿಕೆ ಅಧ್ಯಕ್ಷ ಕೆ.ಟಿ.ಶಿವಕುಮಾರ್ ಆರೋಪಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕುರಿತು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ. ಅಲ್ಲದೇ ನಮ್ಮ ಸಂಘಟನೆ ವತಿಯಿಂದ ಅನೇಕ ಬಾರಿ ಹೋರಾಟ ನಡೆಸಲಾಗಿದೆ. ಆದಾಗ್ಯೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಇಂದು ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲ ಶಾಸಕರಿಗೆ ಪತ್ರ ಬರೆಯುವ ಮೂಲಕ ಗಮನ ಸೆಳೆಯಲಾಗುವುದು ಎಂದರು.
ಕಳೆದ ಒಂದೆರಡು ದಿನಗಳ ಹಿಂದೆ ನಮ್ಮ ಸಂಘಟನೆ ವತಿಯಿಂದ ಭಿಕ್ಷೆ ಬೇಡಿ ಹಣ ಸಂಗ್ರಹಿಸಿ ಸರ್ಕಾರಕ್ಕೆ ಕಳಿಸುವ ಮೂಲಕ ಮೆಡಿಕಲ್ ಕಾಲೇಜು ಸ್ಥಾಪನೆಗೆ ಒತ್ತಾಯಿಸಲಾಯಿತು. ಈಗ ಪತ್ರ ಬರೆಯಲಾಗುತ್ತಿದೆ. ಇದಕ್ಕೂ ಜನಪ್ರತಿನಿಧಿಗಳು ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ಶಾಸಕರುಗಳಿಗೆ ಸೀರೆ, ಬಳೆ ಕಳಿಸಿಕೊಡಲಾಗುವುದು. ಇದಕ್ಕೂ ಜಗ್ಗದಿದ್ದಲ್ಲಿ ಅವರ ಮನೆಗಳ ಮುಂದೆ ಹೋಗಿ ಅವರನ್ನು ಸಮಾಧಿ ಮಾಡುವ ಮೂಲಕ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ನವ ನಿರ್ಮಾಣ ವೇದಿಕೆಯ ವಿವಿಧ ಪದಾಧಿಕಾರಿಗಳು ಹಾಜರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos