ಐಪಿಎಲ್ ಆರಂಭಕ್ಕೂ ಮೊದಲೇ ಕೆಕೆಆರ್ ಪಡೆಗೆ ಶಾಕ್

ಐಪಿಎಲ್ ಆರಂಭಕ್ಕೂ ಮೊದಲೇ ಕೆಕೆಆರ್ ಪಡೆಗೆ ಶಾಕ್

ಕೋಲ್ಕತ, ಮಾ.15, ನ್ಯೂಸ್ ಎಕ್ಸ್ ಪ್ರೆಸ್ : ಕೋಲ್ಕತಾ ನೈಟ್’ರೈಡರ್ಸ್ ತಂಡದ ಆಟಗಾರ ವೇಗಿ ಕಮಲೇಶ್ ನಾಗರಕೋಟಿ ಗಾಯದ ಸಮಸ್ಯೆಯಿಂದ ಮತ್ತೊಮ್ಮೆ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇನ್ನು ಮತ್ತೋರ್ವ ವೇಗಿ ಶಿವಂ ಮಾವಿ ಕೂಡಾ ಐಪಿಎಲ್’ನಿಂದ ಹೊರಬಿದ್ದಿದ್ದಾರೆ.

ಟೂರ್ನಿ ಆರಂಭಕ್ಕೂ ಮೊದಲೇ ಈ 2 ಆಟಗಾರರು ತಂಡದಿಂದ ಹೊರಬಿದ್ದಿದ್ದು ಕೆಕೆಆರ್ ಪಾಲಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ.

ಕಮಲೇಶ್ ನಾಗರಕೋಟಿ ಪಾದದ ಗಾಯದಿಂದಾಗಿ ಹೊರಬಿದ್ದಿದ್ದರೆ, ಶಿವಂ ಮಾವಿ ಬೆನ್ನು ನೋವಿನ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಇವರಿಬ್ಬರ ಬದಲಿಗೆ 2019ರ ಹರಾಜಿನಲ್ಲಿ ಸೇಲ್ ಆಗದೇ ಉಳಿದಿದ್ದ ಕೇರಳ ವೇಗಿ ಸಂದೀಪ್ ವಾರಿಯರ್ ಅವರನ್ನು ಕೆಕೆಆರ್ ಪ್ರಾಂಚೈಸಿ ತಂಡಕ್ಕೆ ಸೇರಿಸಿಕೊಂಡಿದೆ.

ತ್ರಿಶೂರ್ ಮೂಲದ ಸಂದೀಪ್ 2018-19ನೇ ಸಾಲಿನ ವಿಜಯ್ ಹಜಾರೆ ಟೂರ್ನಿಯಲ್ಲಿ ಕೇರಳ ಪರ ಗರಿಷ್ಠ ವಿಕೆಟ್ ಪಡೆದ ಬೌಲರ್ ಆಗಿ ಹೊರಹೊಮ್ಮಿದ್ದರು. ಇದಷ್ಟೇ ಅಲ್ಲದೇ ಕಳೆದ ಆವೃತ್ತಿ ರಣಜಿ ಟೂರ್ನಿಯಲ್ಲೂ ಕೇರಳ ಪರ ಗರಿಷ್ಠ ವಿಕೆಟ್ ಪಡೆದಿದ್ದ ಸಂದೀಪ್ ವಾರಿಯರ್, 2019ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಂಧ್ರ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos