ಹೈದರಬಾದ್, ಅ. 2 : ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ(ಇಸ್ರೋ)ದ ನ್ಯಾಶನಲ್ ರಿಮೋಟ್ ಸೆನ್ಸಿಂಗ್ ಸೆಂಟರ್(ಎನ್ ಆರ್ ಎಸ್ ಸಿ) ನ ವಿಜ್ಞಾನಿಯೊಬ್ಬರನ್ನು ಕೊಲೆಗೈದಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜ್ಞಾನಿ ಎಸ್.ಸುರೇಶ್ (56ವರ್ಷ) ನಗರದ ಹೃದಯಭಾಗದಲ್ಲಿ ಇರುವ ಅಮೀರ್ ಪೇಟ್ ಪ್ರದೇಶದಲ್ಲಿರುವ ಅನ್ನಪೂರ್ಣ ಅಪಾರ್ಟ್ ಮೆಂಟ್ ನಲ್ಲಿನ ಫ್ಲ್ಯಾಟ್ ನಲ್ಲಿ ಅಪರಿಚಿತ ವ್ಯಕ್ತಿಗಳು ಹತ್ಯೆಗೈದಿರುವುದಾಗಿ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಸುರೇಶ್ ಅವರು ಕೇರಳ ಮೂಲದವರಾಗಿದ್ದು, ಫ್ಲ್ಯಾಟ್ ನಲ್ಲಿ ಒಬ್ಬರೇ ವಾಸವಾಗಿದ್ದರು. ಮಂಗಳವಾರ ಕಚೇರಿಗೆ ಆಗಮಿಸದಿರುವುದನ್ನು ಗಮನಿಸಿ ಸಹೋದ್ಯೋಗಿಯೊಬ್ಬರು ಅವರ ಮೊಬೈಲ್ ಗೆ ಕರೆ ಮಾಡಿದ್ದರು.