ದಾಳಿ ಕುರಿತು ಆದಾಯ ತೆರಿಗೆ ಇಲಾಖೆ ಸ್ಪಷ್ಟನೆ

ದಾಳಿ ಕುರಿತು ಆದಾಯ ತೆರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು, ಮಾ, 28, ನ್ಯೂಸ್ ಎಕ್ಸ್ ಪ್ರೆಸ್: ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಇಂದು ರಾಜ್ಯದ ವಿವಿಧೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆಂಬ ಆರೋಪದ ಕುರಿತು ಇಲಾಖೆ, ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನಡೆದಿದೆ. ಯಾವುದೇ ಶಾಸಕ, ಸಚಿವರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿಲ್ಲವೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಐಟಿ ಇಲಾಖೆಗೆ ಲಭಿಸಿದ ವಿಶ್ವಾಸಾರ್ಹ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದ್ದು, ಇದಕ್ಕೆ ಪೂರಕವಾಗಿ ದಾಳಿ ವೇಳೆ ಸೂಕ್ತ ದಾಖಲೆ ಲಭಿಸಿರುವುದಾಗಿ ತಿಳಿಸಲಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಕೆಲ ನಾಯಕರು ಐಟಿ ಇಲಾಖೆಯ ದಾಳಿ ರಾಜಕೀಯ ಪ್ರೇರಿತ ಎಂದು ಆರೋಪ ಮಾಡಿದ್ದ ಹಿನ್ನಲೆಯಲ್ಲಿ ಐಟಿ ಇಲಾಖೆ ಈ ಸ್ಪಷ್ಟನೆ ನೀಡಿದೆ ಎನ್ನಲಾಗಿದ್ದು, ಭದ್ರತೆ ದೃಷ್ಟಿಯಿಂದ ಸಿ.ಆರ್.ಪಿಎಫ್. ಸಿಬ್ಬಂದಿಯನ್ನು ಬಳಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos