ಜಾರಕಿಹೊಳಿ ಮಗ ರಾಜಕೀಯಕ್ಕೆ ಎಂಟ್ರಿ.!

ಜಾರಕಿಹೊಳಿ ಮಗ ರಾಜಕೀಯಕ್ಕೆ ಎಂಟ್ರಿ.!

ಬೆಳಗಾವಿ ಏ. 27, ನ್ಯೂಸ್ ಎಕ್ಸ್ ಪ್ರೆಸ್: ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಮಗ ಅಮರ್ ಜಾರಕಿಹೊಳಿ ಕೆಎಂಎಫ್ ನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಗೊಳ್ಳುವ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ.

ಬೆಳಗಾವಿ ಕೆಎಂಎಫ್ ಗೆ ಅಮರ್ ಜಾರಕಿಹೊಳಿ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಏ. 28 ರಂದು ನಡೆಯಲಿರುವ ಕೆಎಂಎಫ್ ನಿರ್ದೇಶಕರ ಚುನಾವಣೆಯಲ್ಲಿ ಒಟ್ಟು 14 ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದ್ದು, ಆದರೆ ಇದೀಗ 7 ಸ್ಥಾನಗಳು ನಿರ್ದೇಶಕ ಹುದ್ದೆಗೆ ಅವಿರೋಧ ಆಯ್ಕೆಯಾಗಿದೆ.

ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹಿಡಿತದಲ್ಲಿ ಇರುವ ಕೆಎಂಎಫ್. ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಕೆಎಂಎಫ್ ಮತ್ತು ಡಿಸಿಸಿ ಬ್ಯಾಂಕ್ ಪ್ರಮುಖ ಪಾತ್ರವಹಿಸುತ್ತದೆ. ಇನ್ನೂ ಚಿಕ್ಕಪ್ಪ ಬಾಲಚಂದ್ರ ಜಾರಕಿಹೊಳಿಯಿಂದ ಅಮರ್ ಕೆಎಂಎಫ್ ಎಂಟ್ರಿಯಾಗಿದ್ದಾರೆ ಎನ್ನಲಾಗಿದೆ.

ಅಮರ್ ರಾಜಕೀಯ ಪ್ರವೇಶಕ್ಕೆ ಮೊದಲ ಮೆಟ್ಟಿಲು ಕೆಎಂಎಫ್ ನಿರ್ದೇಶಕರಾಗಿ ನೇಮಕವಾಗುತ್ತಿದ್ದಾರೆ ಎಂದು ಹೇಳಲಾಗುತ್ತಾದೆ.

 

ಫ್ರೆಶ್ ನ್ಯೂಸ್

Latest Posts

Featured Videos