ಬೆಂಗಳೂರು, ಮಾ.25, ನ್ಯೂಸ್ ಎಕ್ಸ್ ಪ್ರೆಸ್: ಉಮೇಶ್ ಜಾಧವ್ ಅವರ ರಾಜೀನಾಮೆ ವಿಚಾರಣೆಯನ್ನು ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಮುಂದೂಡಿದ್ದಾರೆ.
ಇಂದು ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ವಿಚಾರಣೆ ನಡೆಸಿದ್ದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಉಮೇಶ್ ಜಾಧವ್ ರಾಜೀನಾಮೆ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.
ಚುನಾಯಿತ ಪ್ರತಿನಿಧಿಯಾಗಿ ಉಮೇಶ್ ಜಾಧವ್ ರಾಜೀನಾಮೆ ಕೊಡುವಾಗ ಚಿಂಚೋಳಿ ಮತದಾರರ ಅಭಿಪ್ರಾಯವನ್ನು ಕೇಳಿದ್ದಾರೋ ಇಲ್ಲವೋ ಎಂಬುದನ್ನು ಆಲಿಸಿದ್ದೇನೆ. ಜಾಧವ್ ಚುನಾವಣಾ ಸ್ಪರ್ಧೆಯ ವಿಚಾರ ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಅದರ ಬಗ್ಗೆ ನಾನೂ ಏನೂ ಹೇಳಲ್ಲ ಎಂದರು.