ಹೈದ್ರಾಬಾದ್, ಮೇ. 30, ನ್ಯೂಸ್ ಎಕ್ಸ್ ಪ್ರೆಸ್: ಜಗನ್ ಅಣ್ಣಾ ಎಂದೇ ಆಂಧ್ರ ಪ್ರದೇಶದಲ್ಲಿ ಜನಪ್ರಿಯರಾಗಿರುವ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ಆಂಧ್ರಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಮೇ 30 ರಂದು ಹೈದರಾಬಾದ್ ನ ಇಂದಿರಾ ಗಾಂಧಿ ಮುನ್ಸಿಪಲ್ ಕಾರ್ಪೊರೇಶನ್ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಅಂತಾ ವೈಎಸ್ಆರ್ ಕಾಂಗ್ರೆಸ್ ನಾಯಕ ಉಮ್ಮಾರೆಡ್ಡಿ ವೆಂಕಟೇಶ್ವರಲು ಹೇಳಿದ್ದಾರೆ.
ರಾಜ್ಯಪಾಲ ಇಎಸ್ಎಲ್ ನರಸಿಂಹನ್ ಗೌಪ್ಯತೆ ಮತ್ತು ಅಧಿಕಾರದ ಪ್ರಮಾಣವಚನ ಬೋಧಿಸಲಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಚಂದ್ರಬಾಬು ನಾಯ್ಡು ಸಂಜೆ 5 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ. ಈ ಹಿಂದೆ ಅತಿದೊಡ್ಡ ಪಕ್ಷವಾಗಿ ಸರ್ಕಾರ ರಚನೆ ಮಾಡಿದ್ದ ಟಿಡಿಪಿ ಈ ಬಾರಿ ಕೇವಲ 25 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ಡಿಎಂಕೆ ಮುಖ್ಯಸ್ಥ ಎಂ ಕೆ ಸ್ಟಾಲಿನ್ ಸೇರಿದಂತೆ ಹಲವು ರಾಜಕೀಯ ಗಣ್ಯರು ಮತ್ತು ವಿವಿಐಪಿಗಳು ಹೈದರಾಬಾದ್ ನ ಇಂದಿರಾ ಗಾಂಧಿ ಮುನ್ಸಿಪಲ್ ಕಾರ್ಪೊರೇಶನ್ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.