ಜೈಲಿನಲ್ಲಿ ಇರಿಸಿದ್ದಕ್ಕೆ ಎದೆಗುಂದಿಲ್ಲ : ಡಿಕೆಶಿ

ಜೈಲಿನಲ್ಲಿ ಇರಿಸಿದ್ದಕ್ಕೆ ಎದೆಗುಂದಿಲ್ಲ : ಡಿಕೆಶಿ

ಬೆಂಗಳೂರು, ಅ. 26 : ಇದು ಕೇವಲ ಆರಂಭ ಅಷ್ಟೇ ಅಂತ್ಯವಲ್ಲ ಎಂದು ಬೆಂಗಳೂರಿಗೆ ಬಂದಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ.
ನಗರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಮಾಜಿ ಸಚಿವರು, ಹಗಲು-ರಾತ್ರಿ ನನಗೋಸ್ಕರ ಹೋರಾಟ ಮಾಡಿ, ಪೂಜೆ ಸಲ್ಲಿಸಿದ ನಿಮಗೆ ಅಭಿನಂದನೆಗಳು. ಕಾಂಗ್ರೆಸ್ ಪ್ರಾಮಾಣಿಕ ಕಾರ್ಯಕರ್ತನಾದ ನನ್ನ ಮೇಲೆ ಆದ ಅನ್ಯಾಯವನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ರಿ. ನಿಮಗೆ ನನಗೆ ಧನ್ಯವಾದ ಎಂದು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಕೈ ಮುಗಿದರು.
ಇದು ಒಂದು ದಿನಕ್ಕೆ ಮುಗಿಯುವ ಅಧ್ಯಾಯವಲ್ಲ. ಇದು ಆರಂಭ ಅಷ್ಟೇ, ಅಂತ್ಯ ಅಲ್ಲ. ನಾನು ಯಾರಿಂದಲೂ ಲಂಚ ಪಡೆದಿಲ್ಲ. ಯಾರಿಗೂ ಹೆದರುವ ಅಗತ್ಯವಿಲ್ಲ. ಜೈಲಿನಲ್ಲಿ ಇರಿಸಿದ್ದಕ್ಕೆ ನಾನು ಎದೆಗುಂದಿಲ್ಲ ಎಂದು ಗುಡುಗಿದರು.
ಎಲ್ಲರಿಗೂ ಅಭಿನಂದನೆ:
ತಾಯಿ, ಮಗಳು ಸೇರಿದಂತೆ ನೂರಕ್ಕೂ ಅಧಿಕ ಸ್ನೇಹಿತರು ಹಾಗೂ ಬಂಧುಗಳಿಗೆ ಕಿರುಕುಳ ಕೊಟ್ಟಿದ್ದನ್ನು ನೀವು ನೋಡಿದ್ದೀರಿ. ನನ್ನ ಮಗಳನ್ನು ನಿಮ್ಮ ಮಗಳು ಎಂಬ ಕಾಳಜಿ ತೋರಿದ್ರಿ. ಸಂಕಷ್ಟದ ವೇಳೆ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ.

ಫ್ರೆಶ್ ನ್ಯೂಸ್

Latest Posts

Featured Videos