ಜನಾರ್ದನ ರೆಡ್ಡಿ ಬಿಜೆಪಿಗೆ ವಾಪಸ್ ಬಂದಿದ್ದು ಆನೆ ಬಲ ಬಂದಂತೆ: ಬಿ ಎಸ್‌ ವೈ

ಜನಾರ್ದನ ರೆಡ್ಡಿ ಬಿಜೆಪಿಗೆ ವಾಪಸ್ ಬಂದಿದ್ದು ಆನೆ ಬಲ ಬಂದಂತೆ: ಬಿ ಎಸ್‌ ವೈ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ವಿರುದ್ಧ ಅಸಮಾಧಾನಗೊಂಡು ಕೆಆರ್​ಪಿಪಿ ಪಕ್ಷ ಸ್ಥಾಪಿಸಿದ್ದ ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತೆ ತವರಿಗೆ ಮರಳಿದ್ದಾರೆ. ಇಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿ ಬಿಜೆಪಿ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ ಶಾಸಕ ಜನಾರ್ದನರೆಡ್ಡಿ ಬಿಜೆಪಿಗೆ  ಮತ್ತೆ ವಾಪಸ್ ಆಗಿದ್ದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನುಡಿದರು.

ಜನಾರ್ದನ ರೆಡ್ಡಿ  ಬಿಜೆಪಿಗೆ ಮರುಸೇರ್ಪಡೆ ಬಳಿಕ ಮಾತನಾಡಿದ ಬಿಎಸ್ ವೈ, ಜನಾರ್ದನರೆಡ್ಡಿಯನ್ನು ಮುಂದಿನ ದಿನದಲ್ಲಿ ಸೂಕ್ತವಾಗಿ ಬಳಸಿಕೊಳ್ಳುತ್ತೇವೆ. ಜನಾರ್ದನರೆಡ್ಡಿ ಬಿಜೆಪಿಗೆ ವಾಪಸಾಗಿದ್ದರಿಂದ ಖುಷಿಯಾಗಿದೆ ಎಂದರು.

ಬಿವೈ ವಿಜಯೇಂದ್ರ ಮಾತನಾಡಿ ಜನಾರ್ದನ ರೆಡ್ಡಿ ಬಿಜೆಪಿಗೆ ಬಂದಿದ್ದಕ್ಕೆ ನಮಗೆ ಸಂತೋಷವಾಗಿದೆ. ಪ್ರಧಾನಿ ಮೋದಿ ನಾಯಕತ್ವ ಒಪ್ಪಿಕೊಂಡು ಬಿಜೆಪಿಗೆ ಬಂದಿದ್ದಾರೆ. ರಾಜ್ಯದ ಎಲ್ಲಾ ಕ್ಷೇತ್ರದಲ್ಲಿ ಗೆಲ್ಲಬೇಕೆಂದು ರೆಡ್ಡಿ ಪಕ್ಷಕ್ಕೆ ಸೇರಿದ್ದಾರೆ. ದೇಶದ ಭವಿಷ್ಯ ರೂಪಿಸುವ ಚುನಾವಣೆ ಇದು ಎಂದರು.

ಅವರು ಬಂದಿರುವುದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಸಾಕಷ್ಟು ಶಕ್ತಿ ಬಂದಂತಾಗಿದೆ. ಬಳ್ಳಾರಿ, ಕೊಪ್ಪಳ ಸೇರಿ ನಮ್ಮ ಭಾಗದಲ್ಲಿ ಅತೀ ಹೆಚ್ಚು ಮತಗಳು ಬರುತ್ತವೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದರು.

ಫ್ರೆಶ್ ನ್ಯೂಸ್

Latest Posts

Featured Videos