ಜಂಟಿ ಸಮಾವೇಶದಲ್ಲಿ ಕಣ್ಣೀರು ಹಾಕಿದ ಸಿಎಂ ಕುಮಾರಸ್ವಾಮಿ

ಜಂಟಿ ಸಮಾವೇಶದಲ್ಲಿ ಕಣ್ಣೀರು ಹಾಕಿದ ಸಿಎಂ ಕುಮಾರಸ್ವಾಮಿ

ಮೈಸೂರು, . 15, ನ್ಯೂಸ್ ಎಕ್ಸ್ ಪ್ರೆಸ್ : ಮುಖ್ಯಮಂತ್ರಿ ಆದ ದಿನದಿಂದ ಒಂದು ದಿನವೂ ನೆಮ್ಮದಿಯಾಗಿ ಆಡಳಿತ ಮಾಡಲು ಬಿಟ್ಟಿಲ್ಲ ನನಗೆ. ನಾನು 120 ಸೀಟ್ ಗೆದ್ದಿದ್ದರೆ ನೆಮ್ಮದಿಯಾಗಿ ಆಡಳಿತ ನಡೆಸುತ್ತಿದೆ. ಈಗ ಎಂಥಾ ಕಷ್ಟದಲ್ಲಿ ಸರ್ಕಾರ ನಡೆಸುತ್ತಿದ್ದೇನೆ ನಿಮಗೆ ಗೊತ್ತಿಲ್ಲ,” ಎಂದು ಸಿಎಂ ಎಚ್ಡಿಕೆ ಕಣ್ಣೀರು ಹಾಕಿ ತಮ್ಮ ದುಃಖವನ್ನು ಮತ್ತೊಮ್ಮೆ ಹೊರಹಾಕಿದ್ದಾರೆ.

ಕೆ.ಆರ್ ಪೇಟೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಜಂಟಿ ಸಮಾವೇಶದಲ್ಲಿ ಮಾತನಾಡಿದ ಅವರು, “ರೈತರು ಆತ್ಮಹತ್ಯೆ ಮಾಡಿಕೊಂಡಾಗ ಜಾತಿ, ಧರ್ಮ ನೋಡದೇ  ಅವರ ಮನೆಗೆ ಹೋಗಿ ನಾನು ಸಾಂತ್ವನ ಹೇಳಿದೆ. 200 ಕುಟುಂಬಗಳಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ತಾಯಂದಿರ ಕಷ್ಟ ಕೇಳೋಕೆ ಯಾರಾದರು ಬಂದಿದ್ರಾ,” ಎಂದು ಪ್ರಶ್ನಿಸಿದರು.

ಪಕ್ಷೇತರ ಅಭ್ಯರ್ಥಿ ಕಣ್ಣಲ್ಲಿ ನೀರು ಹಾಕಿ ಡ್ರಾಮಾ ಶುರು ಮಾಡಿದ್ದಾರೆ. ಆದರೆ, ನಿಜವಾಗಿ ಕಣ್ಣೀರು ಹಾಕುತ್ತಿರುವವರು ನಾನು, ನಮ್ಮ ತಂದೆ. ಜನರ ಸಮಸ್ಯೆ ನೋಡಿ ಕಣ್ಣಲ್ಲಿ ನೀರು ಬರುತ್ತಿದೆ. ಎಂದರು.

ಮೊದಲ ಬಾರಿ ನಾನು ಸಿಎಂ ಆದಾಗ, ಡಾ. ರಾಜಕುಮಾರ್ ನಿಧನರಾದಾಗ ನಮ್ಮ ಗಮನಕ್ಕೆ ತರದೆ ಮಾಧ್ಯಮಕ್ಕೆ ವಿಷಯ ತಿಳಿಸಿದರು. ಅಂದು ಯಾವುದೇ ಮುಂಜಾಗ್ರತೆ ತೆಗೆದುಕೊಳ್ಳಲಾಗಲಿಲ್ಲ. ಹೀಗಾಗಿ ಅಂತ್ಯಕ್ರಿಯೆಯ ವೇಳೆ ಹಲವು ಗೊಂದಲವಾಯಿತು ಎಂದು ಅವರು, ಅಂಬರೀಷ್ ಅವರನ್ನು ಮೊದಲು ಸಂಸದರನ್ನಾಗಿ ಮಾಡಿದ್ದು ಜನತಾ ಪಕ್ಷ. ನಂತರ ಕಾಂಗ್ರೆಸ್ಗೆ  ಸೇರ್ಪಡೆಯಾದರು. ನಾನು ಅವರಿಗೆ ಏನು ಸಹಾಯ ಮಾಡಿದ್ದೇನೆ. ಅವರು ನನಗೆ ಏನು ಸಹಾಯ ಮಾಡಿದ್ದಾರೆ ಈಗ ಮಾತನಾಡುವುದು ಬೇಡ. ಅಂಬರೀಷ್ ನಿಧನರಾದಾಗ ನನಗೆ ನನ್ನ ಮಗ ತಿಳಿಸಿದ. ಆಸ್ಪತ್ರೆಗೆ ಹೋದಾಗ ಅಲ್ಲಿ ಇಂದು ಚುನಾವಣೆ ನಡೆಸಲು ಬಂದವರು ಇರಲಿಲ್ಲ. ಅವರು ವಾಸ ಮಾಡುತ್ತಿದ್ದ ಮನೆಗೆ ಪಾರ್ಥಿವ ಶರೀರ ತೆಗೆದುಕೊಂಡು ಹೋಗಲು ವ್ಯವಸ್ಥೆ ಮಾಡಿದೆ. ಆ ತಾಯಿಗೆ ಕೇಳುತ್ತೇನೆ. ಆ ಸಣ್ಣ ಸೌಜನ್ಯವಾದರೂ ಅವರಿಗೆ ಇದೆಯಾ ಎಂದು ಸುಮಲತಾ ವಿರುದ್ಧ ಆಕ್ರೋಶ ಹೊರಹಾಕಿದರು.

ಫ್ರೆಶ್ ನ್ಯೂಸ್

Latest Posts

Featured Videos