60ಕ್ಕೂ ಹೆಚ್ಚು ಜಾನುವಾರು ರಕ್ಷಣೆ

60ಕ್ಕೂ ಹೆಚ್ಚು ಜಾನುವಾರು ರಕ್ಷಣೆ

ಹಾಸನ, ಜು. 19 : ಕಸಾಯಿಖಾನೆಗೆ ಸಾಗಿಸುತ್ತಿದ್ದ 60 ಕ್ಕೂ ಅಧಿಕ ಜಾನುವಾರು ರಕ್ಷಣೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಬಳಿ ನಡೆದಿದೆ.  ಬೆಂಗಳೂರಿನ ಕಡೆಗೆ ಕರುಗಳ ಕಾಲು ಕಟ್ಟಿ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ದಾರಿ ಮಧ್ಯೆ ಪೊಲೀಸರನ್ನು ಕಂಡ ವಾಹನ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. 60 ಕ್ಕೂ ಹೆಚ್ಚು ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇದರ ಜೊತೆಗೆ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos