ಬೆಂಗಳೂರು: ಕೇಂದ್ರದ ಮಾಜಿ ಸಚಿವ ಚಾರ್ಜ್ ಫರ್ನಾಂಡೀಸ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಚಾರ್ಜ್ ಫರ್ನಾಂಡೀಸ್ ಅವರ ನಿಧನ ತೀವ್ರ ದುಃಖವುಂಟುಮಾಡಿದೆ. ಸರಳತೆಯಿಂದಲೇ ದೇಶದ ಜನರ ಮನಸ್ಸು ಗೆದ್ದಿದ್ದ ಅವರು ವಾಜಪೇಯಿ ಅವರ ಕೇಂದ್ರ ಸಚಿವ ಸಂಪುಟದಲ್ಲಿ ರಕ್ಷಣಾ ಸಚಿವರಾಗಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ್ದರು. ಅವರು ಕನ್ನಡಿಗರು ಎನ್ನುವುದು ಹೆಮ್ಮೆಯ ಸಂಗತಿ ಎಂದರು.
ಸೇನಾ ಸಾಮರ್ಥ್ಯವನ್ನು ಹೆಚ್ಚಿಸಿ ದೇಶವನ್ನು ಬಾಹ್ಯ ಶತ್ರುಗಳ ಉಪಟಳದಿಂದ ರಕ್ಷಿಸಿದ್ದ ಜಾರ್ಜ್ ಅವರ ನಿಧನದಿಂದ ದೇಶವು ಓರ್ವ ಆದರ್ಶ ರಾಜಕಾರಣಿಯನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಶಾಂತಿ ಕೋರುವೆ, ಅವರ ಬಂಧುಗಳು ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.