ಜಾರ್ಜ್ ಫರ್ನಾಂಡಿಸ್ ನಿಧನಕ್ಕೆ ಮುಖ್ಯಮಂತ್ರಿಗಳ ಶೋಕ

ಜಾರ್ಜ್ ಫರ್ನಾಂಡಿಸ್ ನಿಧನಕ್ಕೆ ಮುಖ್ಯಮಂತ್ರಿಗಳ ಶೋಕ

ಬೆಂಗಳೂರು; ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಜಾರ್ಜ್ ಫರ್ನಾಂಡಿಸ್ ಅವರು ಮಹತ್ವದ ಸಮಾಜವಾದಿಯಾಗಿದ್ದರಲ್ಲದೆ ರಾಜಕೀಯ ಕ್ಷೇತ್ರದ ಪ್ರಮುಖರಾಗಿದ್ದರು. ಕೊಂಕಣ ರೈಲ್ವೆ ಯೋಜನೆಯ ಹಿಂದಿನ ಮಹತ್ವದ ಶಕ್ತಿಯಾಗಿದ್ದರು. ಈ ಯೋಜನೆಗೆ ಅವರು ನೀಡಿದ ಕೊಡುಗೆಗಾಗಿ ರಾಜ್ಯದ ಜನತೆ ಅವರನ್ನು ಎಂದಿಗೂ ನೆನಪಿನಲ್ಲಿಟ್ಟುಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos