ನವದೆಹಲಿ, ಏ. 26, ನ್ಯೂಸ್ ಎಕ್ಸ್ ಪ್ರೆಸ್: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಸಾವಿನ ಕುರಿತಂತೆ ತನಿಖಾ ಆಯೋಗ ನಡೆಸುತ್ತಿದ್ದ ತನಿಖೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ.
2016 ಡಿಸೆಂಬರ್ 5ರಂದು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಜಯಲಲಿತಾ ಅವರು ಕೊನೆಯುಸಿರೆಳೆದಿದ್ದರು. ಆಸ್ಪತ್ರೆಯಲ್ಲಿ ಎಐಎಡಿಎಂಕೆ ಅಧಿನಾಯಕಿಯ ಸಾವಿನ ಕುರಿತು ನಡೆಯುತ್ತಿರುವ ವಿಚಾರಣೆಯನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿ ಎ.4ರಂದು ಆದೇಶ ನಿಡಿತ್ತು.
ಇದನ್ನು ಪ್ರಶ್ನಿಸಿ ಅಪೋಲೋ ಆಸ್ಪತ್ರೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯ್ ನೇತೃತ್ವದ ಪೀಠವು ಇಂದು ಆಸ್ಪತ್ರೆಯ ಮನವಿಯನ್ನು ಆಲಿಸಿದೆ.
‘ಮುಂದಿನ ಆದೇಶದವರೀಗೆ ತನಿಖಾ ಆಯೋಗದ ವಿಚಾರಣೆಗೆ ತಡೆ ನಿಡಲಾಗಿದೆ.