ಬೆಂಗಳೂರು, ಆ. 15: ಇಂದು ಜೆಡಿಎಸ್ ಕಚೇರಿಯಲ್ಲಿ 73 ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನ ಆಚರಿಸಲಾಯಿತು. ಜೆಡಿಎಸ್ ಮುಖಂಡ ನಾರಾಯಣರಾವ್ ಅವರಿಂದ ಧ್ವಜಾರೋಹಣ ಮಾಡಲಾಯಿತು. ಮಾಜಿ ಪ್ರಧಾನಿ ಹೆಚ್ .ಡಿ ದೇವೇಗೌಡರು, ವಿಧಾನ ಪರಿಷತ್ ಸದಸ್ಯ ಟಿ .ಎ ಶರವಣ, ಹಾಗೂ ಮಾಜಿ ಶಾಸಕರು ಸೇರಿದಂತೆ ಮತ್ತಿತರ ಪ್ರಮುಖರು ಉಪಸ್ಥಿತಿಯಲ್ಲಿದ್ದರು.