ಮುಖಂಡರೆದುರೇ ಕಾಂಗ್ರೆಸ್ ಸೇರಿದ ಜೆಡಿಎಸ್ ಕಾರ್ಯಕರ್ತರು!

ಮುಖಂಡರೆದುರೇ ಕಾಂಗ್ರೆಸ್ ಸೇರಿದ ಜೆಡಿಎಸ್ ಕಾರ್ಯಕರ್ತರು!

ಕಲಬುರಗಿ, ಏ. 13, ನ್ಯೂಸ್ ಎಕ್ಸ್ ಪ್ರೆಸ್: ಕಾಂಗ್ರೆಸ್ ಜೆಡಿಎಸ್ ಜಂಟಿ ಕಾರ್ಯಕ್ರಮದಲ್ಲಿ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದು ಜೆಡಿಎಸ್ ಮುಖಂಡರಲ್ಲಿ ಇರುಸುಮುರುಸು ಉಂಟುಮಾಡಿತ್ತು.  ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿಯಾಗಿ ಹಮ್ಮಿಕೊಂಡಿದ್ದ ವೀರಶೈವ ಲಿಂಗಾಯತ ಸಮಾವೇಶದಲ್ಲಿ ಜೆಡಿಎಸ್ ಕಾರ್ಯಾಕರ್ತರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಗುಲ್ಬರ್ಗಾ ಲೋಕಸಭೆ ಮೈತ್ರಿ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆಗೆ ಬೆಂಬಲ ಸೂಚಿಸಿ ಮೈತ್ರಿ ಪಕ್ಷ ಜಂಟಿಯಾಗಿ ಹಮ್ಮಿಕೊಂಡಿದ್ದ ವೀರಶೈವ ಲಿಂಗಾಯತ ಸಮಾವೇಶದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಗೂ ಮಾಜಿ ಸಚಿವ ಶಾಮನೂರು ಶಿವಕಶಂಕರಪ್ಪ ನೇತೃತ್ವದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಈಶ್ವರ ಖಂಡ್ರೆ ಅವರು ಪಕ್ಷದ ಶಾಲು ಒದಗಿಸುವ ಮೂಲಕ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಕಾಂಗ್ರೆಸ್ ಜೆಡಿಎಸ್ ಜಂಟಿ ಕಾರ್ಯಕ್ರಮದಲ್ಲಿ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದು ಜೆಡಿಎಸ್ ಮುಖಂಡರಲ್ಲಿ ಇರುಸುಮುರುಸು ಉಂಟುಮಾಡಿತ್ತು.

ಫ್ರೆಶ್ ನ್ಯೂಸ್

Latest Posts

Featured Videos