ಇಂದು ಜೆಡಿಎಸ್ ಬೃಹತ್ ಸಮಾವೇಶ

ಇಂದು ಜೆಡಿಎಸ್ ಬೃಹತ್ ಸಮಾವೇಶ

ಬೆಂಗಳೂರು, ಜ. 23: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ರಾಜ್ಯದಲ್ಲಿ ಮತ್ತೆ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕು ಎಂದು ಪಣತೊಟ್ಟಿದ್ದು, ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೆಡಿಎಸ್ ಬೃಹತ್ ಸಮಾವೇಶ ನಡೆಸಲಿದ್ದಾರೆ.

ರಾಜ್ಯದ ಹಳೆ ಮೈಸೂರು ಭಾಗ, ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ ಹಾಗೂ ಹೈದರಾಬಾದ್ ಮತ್ತು ಮುಂಬೈ ಕರ್ನಾಟಕದಲ್ಲಿ ಪಕ್ಷವನ್ನು ಕಟ್ಟಲು ಬೃಹತ್ ಸಮಾವೇಶ ನಡೆಸಲು ಹೆಚ್.ಡಿ.ದೇವೇಗೌಡರು ಬಿಗ್ ಪ್ಲಾನ್ ನಡೆಸಿದ್ದು, ಅದರ ಭಾಗವಾಗಿ ಇಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮೊದಲ ಸಮಾವೇಶ ನಡೆಯುತ್ತಿದೆ. ಹಾಲಿ, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಜಿಲ್ಲಾ ಮುಖಂಡರು, ಕಾರ್ಯಾಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos