ನಾಳೆ ಜೆಡಿಎಸ್ ಬೃಹತ್ ಸಮಾವೇಶ

ನಾಳೆ ಜೆಡಿಎಸ್ ಬೃಹತ್ ಸಮಾವೇಶ

ಬೆಂಗಳೂರು, ಜ. 22: ನಾಳೆ ರಾಜ್ಯದ ರಾಜಧಾನಿಯಲ್ಲಿ ಜೆಡಿಎಸ್ ಪಕ್ಷವನ್ನು ಮತ್ತೆ ರಾಜ್ಯದಲ್ಲಿ ಕಟ್ಟಿ ಬೆಳೆಸುವ ಉದ್ದೇಶದೊಂದಿಗೆ ಕಾರ್ಯಕರ್ತರು, ಮುಖಂಡರ ಬೃಹತ್ ಸಮಾವೇಶವನ್ನು ನಗರದ ಅರಮನೆ ಮೈದಾನದಲ್ಲಿ ಜೆಡಿಎಸ್ ಹಮ್ಮಿಕೊಂಡಿದೆ. ಈ ಮೂಲಕ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಜಯಭೇರಿಗೆ ಶ್ರಮಿಸುವ ತಂತ್ರಗಾರಿಕೆಯನ್ನು ನಡೆಸಲಿದೆ.

ರಾಜ್ಯ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ ನಾಳೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಇಂತಹ ಸಮಾವೇಶದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಪಕ್ಷದ ಕಾರ್ಯಕರ್ತರು, ಮುಖಂಡರು ಆಗಮಿಸಿ ಭಾಗವಹಿಸಲಿದ್ದಾರೆ.

ನಾಳೆ ನಡೆಯಲಿರುವ ಜೆಡಿಎಸ್ ಸಮಾವೇಶದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ ಪಕ್ಷದ ಮುಖಂಡರು, ಕಾರ್ಯಕರ್ತರ ಭಾವನೆಗಳಿಗೆ ಸರಿಯಾಗಿ ಸ್ಪಂದಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದಿಸುತ್ತೇವೆ. ಈ ಕಹಿ ಘಟನೆಯನ್ನು ನಾವೆಲ್ಲಾ ಮರೆತು ಮತ್ತೆ ಪಕ್ಷ ಕಟ್ಟಿ ಬೆಳೆಸಬೇಕು ಎಂಬುದಾಗಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos