ಜೆಡಿಎಸ್ ನಿಂದ ಬಿಜೆಪಿ ಸೇರಿದ 80ಕ್ಕೂ ಹೆಚ್ಚು ಮುಖಂಡರು

ಜೆಡಿಎಸ್ ನಿಂದ ಬಿಜೆಪಿ ಸೇರಿದ 80ಕ್ಕೂ ಹೆಚ್ಚು ಮುಖಂಡರು

ಚಿಕ್ಕಮಗಳೂರು, ಏ. 17, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಗೆ ಇನ್ನೇನು ಕ್ಷಣಗಣನೆ ಸುರುವಾಗಿದ್ದು, ಈ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಕೂಡ ಜೋರಾಗಿಯೇ ನಡೆಯುತ್ತಿದೆ. ಹೌದು, ಚಿಕ್ಕಮಗಳೂರಿನಲ್ಲಿ ರಾತ್ರೋರಾತ್ರಿ ಮೈತ್ರಿ ಪಕ್ಷಕ್ಕೆ ಬಿಜೆಪಿ ಶಾಕ್ ಕೊಟ್ಟಿದೆ. ರಾತ್ರಿ ಬೆಳಗಾಗುವುದರೊಳಗೆ 80ಕ್ಕೂ ಹೆಚ್ಚು ದಳಪತಿಗಳು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಜೆಡಿಎಸ್ ನ ಖಾಂಡ್ಯಾ ಹೋಬಳಿಯ ಸಂದೇಶ್ ಗೌಡ ಸೇರಿದಂತೆ ತಾಲೂಕು ಹಾಗೂ ಹೋಬಳಿ ಮಟ್ಟದ ಜೆಡಿಎಸ್ ಮುಖಂಡರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಚುನಾವಣೆಗೆ 1 ದಿನ ಬಾಕೀ ಇರುವಾಗಲೇ ಜೆಡಿಎಸ್ ಗೆ ಬಿಗ್ ಶಾಕ್ ನೀಡಲಾಗಿದೆ.

ಶೃಂಗೇರಿಯ ಮಾಜಿ ಶಾಸಕ ಜೀವರಾಜ್ ನೇತೃತ್ವದಲ್ಲಿ ಬೂತ್ ಮಟ್ಟದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಬಹುತೇಕ ಜನರು ಬಿಜೆಪಿಗೆ ಸೇರಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos