ಜೆಡಿಎಸ್ ಪ್ರಚಾರ ವಾಹನಕ್ಕೆ ಚಾಲನೆ

ಜೆಡಿಎಸ್ ಪ್ರಚಾರ ವಾಹನಕ್ಕೆ ಚಾಲನೆ

ಮೈಸೂರು, ಮಾ.25, ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯದ ಗಮನಸೆಳೆದಿರುವ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಮೈಸೂರಿನಿಂದ ಜೆಡಿಎಸ್ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಕುಮಾರಪರ್ವ ಪ್ರಚಾರ ವಾಹನಕ್ಕೆ ಮೈಸೂರಿನಿಂದಲೇ ಚಾಲನೆ ನೀಡಲಾಗಿತ್ತು. ಅದೇ ರೀತಿ ಲೋಕಸಭಾ ಚುನಾವಣೆ ಪ್ರಚಾರ ವಾಹನಕ್ಕೂ ಇಲ್ಲಿಂದಲೇ ಚಾಲನೆ ನೀಡಿದ್ದು ವಿಶೇಷವಾಗಿತ್ತು.

ಇದಕ್ಕೂ ಮುನ್ನ ನಿಖಿಲ್ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ತಮ್ಮ ನಾಮಪತ್ರವನ್ನು ದೇವಿ ಬಳಿ ಇಟ್ಟು ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತಿತರರು ಜೊತೆಯಲ್ಲಿದ್ದರು.

ಮೈಸೂರಿನಿಂದ ಮಂಡ್ಯಕ್ಕೆ ಆಗಮಿಸಿ ಮಂಡ್ಯದಲ್ಲಿ ರೋಡ್‍ಶೋ ನಡೆಸಿ ನಂತರ ಜಿಲ್ಲಾಧಿಕಾರಿಗಳಿಗೆ ನಿಖಿಲ್ ಕುಮಾರಸ್ವಾಮಿ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಸಚಿವರು, ಶಾಸಕರು, ಮುಖಂಡರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos