ಬೆಂಗಳೂರು: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಇಂದು ಮತ್ತು ನಾಳೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮ, ನರ್ಸಿಂಗ್ ಯಾವುದೇ ತಾಂತ್ರಿಕ ತಾಂತ್ರಿಕ ತರ ಪದವಿ ಸಾತಕೋತ್ತರ ಪದವಿಯನ್ನು ಪಾಸ್, ಫೇಲು ಆದ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್ಲೈನಲ್ಲಿ ನೋಂದಾಯಿಸಿಕೊಂಡು ಭಾಗಿಯಾಗಬಹುದಾಗಿದೆ.
ಅರಮನೆ ಮೈದಾನ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ಈ ಉದ್ಯೋಗ ಮೇಳದಲ್ಲಿ ಸುಮಾರು 500ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತದೆ.
ಸಿಎಂ ಸಿದ್ದರಾಮಯ್ಯನವರು ರಾಜ್ಯ ನಿರುದ್ಯೋಗಿ ಯುವಕ ಯುವಕನಿಗೆ ಉದ್ಯೋಗ ದೊರಕಿಸುವ ಸಲುವಾಗಿ ವಿವಿಧ ಇಲಾಖೆಗಳ ಸಚಿವರ ನೋಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಆ ಸಮಿತಿ ಮಾರ್ಗದರ್ಶನದಂತೆ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದ್ದಾರೆ.
http://udyoga.skillconnet.kaushalkar.com/ ಈ ಲಿಂಕ್ ಇದ್ದಲ್ಲಿ ನೋಂದಾಯಿಸಬೇಕು ಮತ್ತು ಉದ್ಯೋಗ ಮೇಳ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬಹುದು