ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ 16 ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ 16 ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಏ. 19, ನ್ಯೂಸ್ ಎಕ್ಸ್ ಪ್ರೆಸ್: ಉತ್ತರ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕಡೆಯ ದಿನಾಂಕದ ಒಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ಸತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿದರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.

ಆಯ್ಕೆ ವಿಧಾನ: ಅಭ್ಯರ್ಥಿಗಳ ಆಯ್ಕೆಯು ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರೆ ಹುದ್ದೆಗಳ) (ನೇಮಕಾತಿ) ನಿಯಮ 1982 ಮತ್ತು (ತಿದ್ದುಪಡಿ) ನಿಯಮ 2007ರ ಪ್ರಕಾರ. (1) ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತೆ 5 ನಿಮಿಷಗಳ ಉಕ್ತಲೇಖನವನ್ನು ಕೊಟ್ಟು ಕಂಪ್ಯೂಟರ್ನಲ್ಲಿ ಬೆರಳಚ್ಚು ಮಾಡಿಸಿ ಆರ್ಹತಾ ಪರೀಕ್ಷೆಯನ್ನು ನಡೆಸಲಾಗುವುದು

ಅರ್ಜಿ ಸಲ್ಲಿಸುವ ವಿಧಾನ : ಆನ್ ಲೈನ್ ಮೂಲಕ

ಅರ್ಜಿ ಸಲ್ಲಿಸುವುದಕ್ಕೆ ಕೊನೆ ದಿನಾಂಕ : 24-04-2019

ಫ್ರೆಶ್ ನ್ಯೂಸ್

Latest Posts

Featured Videos