ಪತ್ರಕರ್ತರ ಕಾರ್ಯ ಶ್ಲಾಘನೀಯ: ಡಾ.ವಿರೇಂದ್ರ ಹೆಗ್ಗಡೆ

ಪತ್ರಕರ್ತರ ಕಾರ್ಯ ಶ್ಲಾಘನೀಯ: ಡಾ.ವಿರೇಂದ್ರ ಹೆಗ್ಗಡೆ

ಮಂಗಳೂರು, ಮೇ. 20, ನ್ಯೂಸ್ ಎಕ್ಸ್ ಪ್ರೆಸ್ :  ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತ ರ ಸಂಘದ ಆಶ್ರಯದಲ್ಲಿ ಜುಲೈ 1 ರಂದು ನಡೆಯಲಿರುವ ಜಿಲ್ಲಾ ಪತ್ರಕರ್ತ ರ ಸಮ್ಮೇಳನದ ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ದ ಡಾ ಡಿ.ವೀರೇಂದ್ರ ಹೆಗ್ಗಡೆಯವರು ಅನಾವರಣ ಗೊಳಿಸಿದರು. ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಜ್ಞಾನವಂತರು, ಪ್ರಜ್ಞಾವಂತರಾಗಿದ್ದು, ಸರಿಯಾದ ಮಾಹಿತಿ ಪಡೆದು ಘಟನೆಯ ವರದಿ ಮಾಡುತ್ತಾರೆ.

ಜಿಲ್ಲೆಯ ಎರಡು ತಲೆಮಾರುಗಳಿಂದ ಕಂಡಿದ್ದೇನೆ. ಹಿರಿಯ ಪತ್ರಕರ್ತರ ತತ್ವಾದರ್ಶ ಮೈಗೂಡಿಸಿಕೊಂಡು, ಜನರ ನಂಬಿಕೆ ಕಳೆದುಕೊಳ್ಳದೆ ಮಾಧ್ಯಮದ ಘನತೆ ಗೌರವ ಉಳಿಸಿ ಮುನ್ನಡೆಯಬೇಕೆಂದರು. ಪತ್ರಕರ್ತರ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ,ಸಮ್ಮೇಳನ ದ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ,ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ಮೋಟುಕಾನ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎನ್.ಆರ್.ಪೂವಣಿ, ಸದಸ್ಯ ಧನಕೀರ್ತಿ ಅರಿಗ ಮೊದಲಾದವರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos