ಬೆಂಗಳೂರು, ಮೇ. 21, ನ್ಯೂಸ್ ಎಕ್ಸ್ ಪ್ರೆಸ್: ಕೊನೆಗೂ ಪತ್ರಕರ್ತರ ಹೋರಾಟಕ್ಕೆ ಸರ್ಕಾರ ಮಣಿದಿದೆ. ರಾಜ್ಯ ವಾರ್ತಾ ಇಲಾಖೆ ಮಾನ್ಯತೆ ಪಡೆದ ಹಾಗೂ ಮಾಧ್ಯಮಪಟ್ಟಿಯಲ್ಲಿ ಸೇರಿರುವ ಪತ್ರಿಕೆಯಲ್ಲಿ ಕೆಲಸ ಮಾಡುವ ಪತ್ರಕರ್ತರು ಉಚಿತ ಚಿಕಿತ್ಸೆ ನೀಡೋದಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ‘ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ’ ಪತ್ರಕರ್ತರಿಗೆ ಉಚಿತ ಚಿಕಿತ್ಸೆ ನೀಡೋದಕ್ಕೆ ಸರ್ಕಾರ ಮುಂದಾಗಿದೆ. ಫೆ.16 ರಂದು ಹೊರಡಿಸಿದ್ದ ಆದೇಶವನ್ನು ಕಾರ್ಯ ರೂಪಕ್ಕೆ ತರಲು ವಾರ್ತಾ ಇಲಾಖೆ ಕ್ರಮ ಕೈಗೊಂಡಿದ್ದು, ಮೇ. 21ರಂದು ಈ ಕುರಿತು ಅಧಿಕೃತವಾಗಿ ಆದೇಶ ಹೊರಡಿಸಿದೆ.