ಬೆಂಗಳೂರು, ನ. 06: ಕನ್ನಡ ರಾಜ್ಯೋತ್ಸವ ದಿನದಂದು ಮಿಂಟೋ ಆಸ್ಪತ್ರೆಗೆ ನುಗ್ಗಿ ಗಲಾಟೆ ಮಾಡಿ ಕೆಲ ವೈದ್ಯರ ಮೇಲೆ ಹಲ್ಲೆ ಎಸಗಿತ್ತೆನ್ನಲಾದ ವಿರುದ್ಧ ವೈದ್ಯರ ಪ್ರತಿಭಟನೆ ಆರನೇ ದಿನವೂ ಮುಂದುವರಿದಿದೆ.
ಇವರಿಬ್ಬರ ಜಗಳದಿಂದ ಚಿಕಿತ್ಸೆಗೆ ಬರುತ್ತಿರುವ ರೋಗಿಗಳಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಪರದಾಡುತ್ತಿದ್ದಾರೆ. ಇನ್ನೂ ಶುಕ್ರವಾರದವರೆಗೆ ಕಾದು ನೋಡಲು ನಿರ್ಧರಿಸಿರುವ ಕಿರಿಯ ವೈದ್ಯರು, ಶುಕ್ರವಾರದೊಳಗೆ ಬೇಡಿಕೆ ಈಡೇರದಿದ್ದರೆ, ರಾಜ್ಯಾದ್ಯಂತ ಸರ್ಕಾರಿ ಮತ್ತು ಒಪಿಡಿ ಬಂದ್ ಮಾಡುವ ನಿರ್ಧಾರ ಮಾಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯವರು ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಇಂದು ಮತ್ತೆ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ವಾಣಿವಿಲಾಸ, ವಿಕ್ಟೋರಿಯಾ, ಮಿಂಟೋ ಆಸ್ಪತ್ರೆ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.