ಜಾತ್ಯತೀತ ಪಕ್ಷಗಳಿಗೆ ಡಿಎಸ್ಸೆಸ್ ಬೆಂಬಲ: ಮಾವಳ್ಳಿ ಶಂಕರ್

ಜಾತ್ಯತೀತ ಪಕ್ಷಗಳಿಗೆ ಡಿಎಸ್ಸೆಸ್ ಬೆಂಬಲ: ಮಾವಳ್ಳಿ ಶಂಕರ್

ಮಂಗಳೂರು, ಮಾ.23, ನ್ಯೂಸ್ ಎಕ್ಸ್ ಪ್ರೆಸ್: ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಸಮಿತಿಯು ಈ ಲೋಕಸಭಾ ಚುನಾವಣೆಯಲ್ಲಿ ಜಾತ್ಯತೀತ ಮತ್ತು ಕಾಂಗ್ರೆಸ್ ಪಕ್ಷಗಳನ್ನು ಬೆಂಬಲಿಸಲಿದೆ ಎಂದು ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾವಳ್ಳಿ ಶಂಕರ್ ತಿಳಿಸಿದ್ದಾರೆ.

ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಈ ಭಾರಿ ಕಾಂಗ್ರೆಸ್ ಹಾಗೂ ಜಾತ್ಯತೀತ ಪಕ್ಷಗಳನ್ನು ಬೆಂಬಲಿಸಲಿದೆ ಎಂದರು.

ಕಳೆದ ಐದು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಜನರ ಆಶೋತ್ತರಗಳನ್ನು ಈಡೇರಿಸಲು ಸಂಪೂರ್ಣ ವಿಫಲವಾಗಿದೆ. ಕೃಷಿ ಬಿಕ್ಕಟ್ಟಿನಿಂದ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದೆ. ಉದ್ಯೋಗ ಭರವಸೆಯನ್ನು ನೀಡಿದ ಮೋದಿ ಸರಕಾರದ ಮಾತು ಹುಸಿಯಾಗಿದೆ. ಸಣ್ಣ ಉದ್ದಿಮೆದಾರರು ನೋಟು ಅಮಾನ್ಯೀಕರಣದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ದಲಿತ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಸಂವಿಧಾನ ಬದಲಾವಣೆ ಮಾಡುವ ವಿಚಾರವನ್ನು ಸಂಘ ಪರಿವಾರದ ನಾಯಕರು ಮೇಲಿಂದ ಮೇಲೆ ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಜಾಪ್ರಭುತ್ವ ದ ಉಳಿವು ಸಂವಿಧಾನದ ರಕ್ಷಣೆಗೆ ಜಾತ್ಯತೀತ ಶಕ್ತಿಗಳ ಐಕ್ಯ ಇಂದು ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಸಂಚಾಲಕ ಚಂದು, ಜಿಲ್ಲಾ ಪ್ರಧಾನ ಸಂಚಾಲಕ ಬಿ.ಕೆ. ವಸಂತ, ಸದಸ್ಯ ವೆಂಕಣ್ಣ ಕೊಯ್ಯೂರು, ಜಿಲ್ಲಾ ಸಂಚಾಲಕ ಜಗದೀಶ್ ಪಾಂಡೇಶ್ವರ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos