ಬೆಂಗಳೂರು, ಆ.05: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆ.೭ ರಂದು ನಡೆಯುವ ರಾಜ್ಯಾಧ್ಯಕ್ಷ ಹಾಗೂ ಖಜಾಂಚಿ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಸ್ಪರ್ದಿಸಿರುವ ಸಿ.ಎಸ್. ಷಡಾಕ್ಷರಿ ಹಾಗೂ ಆರ್. ಶ್ರೀನಿವಾಸ್ ಇವರಿಗೆ ಮತ ನೀಡುವಂತೆ ಮತದಾರರಲ್ಲಿ ಮನವಿಯನ್ನು ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ದಿಸಿರುವ ಅಭ್ಯರ್ಥಿ ಸಿ.ಎಸ್. ಷಡಾಕ್ಷರಿ ಹಾಗೂ ಖಜಾಂಚಿ ಸ್ಥಾನದ ಅಭ್ಯರ್ಥಿ ಆರ್. ಶ್ರೀನಿವಾಸ್ ಅವರು ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಸ್ಪರ್ದಿಸಿದ್ದು ತಮ್ಮ ಅಮೂಲ್ಯವಾದ ಮತವನ್ನು ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು.
ರಾಜ್ಯದ ಸರ್ಕಾರಿ ನೌಕರರ ಏಳಿಗಗೆ ಶ್ರಮಿಸಲು ಅವಕಾಶ ಮಾಡಿಕೋಟ್ಟು ಹೊಸ ಮನ್ವಂತರದತ್ತ ವಿಕಾಸಶೀಲ ಹೆಜ್ಜೆಗಳನ್ನಿಡಲು ಬದಲಾವಣೆಗಾಗಿ ಕೈ ಜೋಡಿಸೋಣ ಪ್ರಸ್ತುತ ನಿಮ್ಮ ಅಮೂಲ್ಯವಾದ ಮತವನ್ನು ನೀಡುವ ಮೂಲಕ ನಮ್ಮನ್ನು ಬೆಂಬಲಿಸಿದಲ್ಲಿ ಸರ್ಕಾರಿ ನೌಕರರ ಶ್ರೇಯೋಭಿವೃದ್ಧಿಗಾಗಿ ಸೇವಾಭಾವದಿಂದ ಕಾರ್ಯ ನಿರ್ವಹಿಸುತ್ತೇವೆ ಎಂದು ಸಂಕಲ್ಪ ಮಾಡಿ ಮತದಾರರಲ್ಲಿ ಮತ ನೀಡುವಂತೆ ಮನವಿಯನ್ನು ಮಾಡಿದರು.