ಹೈದರಾಬಾದ್, ಮಾ.29, ನ್ಯೂಸ್ ಎಕ್ಸ್ ಪ್ರೆಸ್: ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಮಗಳು ಕೆ.ಕವಿತಾ ಸ್ಪರ್ಧಿಸುತ್ತಿರುವ ನಿಜಾಮಾಬಾದ್ ಕ್ಷೇತ್ರದಲ್ಲಿ ಈ ಬಾರಿ ಒಟ್ಟು 185 ಅಭ್ಯರ್ಥಿಗಳಿದ್ದಾರೆ! ಈ ಪೈಕಿ 170 ಮಂದಿ ರೈತರು.
17 ಲೋಕಸಭಾ ಕ್ಷೇತ್ರಗಳಿರುವ ತೆಲಂಗಾಣದಲ್ಲಿ ಏಪ್ರಿಲ್ 11ರಂದು ಲೋಕಸಭೆ ಚುನಾವಣೆ ನಡೆಯಲಿದೆ. ಹಾಲಿ ಸಂದೆಯಾಗಿರುವ ಕವಿತಾ ಎರಡನೇ ಬಾರಿ ಕಣಕ್ಕಿಳಿದಿದ್ದಾರೆ. ಜೋಳ ಮತ್ತು ಅರಶಿನ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವಲ್ಲಿ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ವಿಫಲವಾಗಿದೆ ಎಂದು ಆರೋಪಿಸಿರುವ ರೈತರು ಪ್ರತಿಭಟನಾರ್ಥ ನಾಮಪತ್ರ ಸಲ್ಲಿಸಿದ್ದಾರೆ. ಅರಶಿನ ಮಂಡಳಿ ನಿರ್ಮಿಸುವಂತೆಯೂ ರೈತರು ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದು, ಇದೂ ನೆರವೇರಿಲ್ಲ ಎನ್ನಲಾಗಿದೆ.