ಬೆಂಗಳೂರು, ಮಾ.20, ನ್ಯೂಸ್ ಎಕ್ಸ್ ಪ್ರೆಸ್ : ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಮುಖಂಡ, ಮಾಜಿ ಕೇಂದ್ರ ಸಚಿವರೂ ಆಗಿರುವ ವಿ.ಶ್ರೀನಿವಾಸ ಪ್ರಸಾದ್ ಬಿಜೆಪಿಯಿಂದ ಕಣಕ್ಕಿಳಿಯುತ್ತಿದ್ದಾರೆ ಎಂಬುದು ಖಚಿತವಾಗುತ್ತಿದ್ದಂತೆಯೇ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್ ಸ್ವಲ್ಪ ಮಟ್ಟಿಗೆ ಆತಂಕಗೊಂಡಂತೆ ಕಂಡು ಬರುತ್ತಿದ್ದರೆ, ಇನ್ನೊಂದೆಡೆ ಬಿಜೆಪಿಯಲ್ಲಿ ಎದ್ದಿರುವ ಅಸಮಾಧಾನದ ಲಾಭವನ್ನು ಪಡೆಯಲು ಬಿಎಸ್ಪಿ ಹವಣಿಸುತ್ತಿದೆ.
ಕಣ್ಣಿಟ್ಟಿದ್ದ ಕ್ಷೇತ್ರ ದಕ್ಕದೆ ಹೋದುದಕ್ಕೆ ಮುನಿಸಿಕೊಂಡು ಒಂದು ವೇಳೆ ಕೆ.ಶಿವರಾಂ ಅವರು ಬಿಜೆಪಿಯಿಂದ ಹೊರಬಂದಿದ್ದೇ ಆದರೆ ಅವರಿಗೆ ಬಿಎಸ್ಪಿಯಿಂದ ಟಿಕೆಟ್ ನೀಡಲು ಬಿಎಸ್ಪಿ ಮುಖಂಡರು ತುದಿಗಾಲಿನಲ್ಲಿ ನಿಂತಿದ್ದಾರೆ .