ಕೈ ನಾಯಕರ ಹೇಳಿಕೆಗೆ ಶ್ರೀ ರಾಮುಲು ತಿರುಗೇಟು

ಕೈ ನಾಯಕರ ಹೇಳಿಕೆಗೆ ಶ್ರೀ ರಾಮುಲು ತಿರುಗೇಟು

ರಾಯಚೂರು, ಅ.16 : ಆರೋಗ್ಯ ಸಚಿವ ಶ್ರೀರಾಮುಲು ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಸರ್ಕಾರ ಬೀಳುತ್ತೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗಳಿಗೂ ತಿರುಗೇಟು ನೀಡಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ ಮುಂದುವರೆಸಿರುವ ಆರೋಗ್ಯ ಸಚಿವ ಶ್ರೀರಾಮುಲು ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದರು. ಆಸ್ಪತ್ರೆ ವೀಕ್ಷಿಸಿ, ರೋಗಿಗಳಿಂದ ಸಮಸ್ಯೆ ಆಲಿಸಿದರು. ಬಳಿಕ ಮಾತನಾಡಿದ ಖಾಸಗಿ ಕ್ಲಿನಿಕ್ಗಳಲ್ಲಿ ಕೆಲಸ ಮಾಡುವ ಸರ್ಕಾರಿ ವೈದ್ಯರ ಬಗ್ಗೆ ಮಾಹಿತ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ಇನ್ನು ಸರ್ಕಾರ ಬೀಳುತ್ತೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಶ್ರೀರಾಮುಲು, ಕಾಂಗ್ರೆಸ್ನವರು ನಿರುದ್ಯೋಗಿಗಳಾಗಿದ್ದಾರೆಂದು ವ್ಯಂಗ್ಯವಾಡಿದರು.

ಫ್ರೆಶ್ ನ್ಯೂಸ್

Latest Posts

Featured Videos